...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ತಮಿಳುನಾಡು: ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಹಲವರಿಗೆ ಗಾಯ

ಶಿವಕಾಶಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಸ್ಫೋಟದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಖಾನೆಯಿಂದ ದಟ್ಟವಾದ ಹೊಗೆ ಕಂಡುಬಂದಿದೆ. ಒಳಗಿನಿಂದ ನಿರಂತರವಾಗಿ ಪಟಾಕಿಗಳ ಸ್ಫೋಟಗಳು ಕೇಳಿಬಂದವು. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

ಶಿವಕಾಶಿಯನ್ನು ‘ಭಾರತದ ಪಟಾಕಿಗಳ ರಾಜಧಾನಿ’ ಎಂದು ಕರೆಯಲಾಗುತ್ತದೆ ಮತ್ತು ಬೆಂಕಿಕಡ್ಡಿ ಉದ್ಯಮ ಮತ್ತು ಮುದ್ರಣಕ್ಕೆ ಪ್ರಮುಖ ಕೇಂದ್ರವಾಗಿದೆ. ಚಿನ್ನ ಕಾಮನಪಟ್ಟಿ ಇರುವ ಇಡೀ ವಿರುದುನಗರ ಜಿಲ್ಲೆಯಲ್ಲಿ ಈ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿವೆ.

ತೆಲಂಗಾಣದ ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ನಿನ್ನೆ ಸಂಭವಿಸಿದ ಸ್ಫೋಟದಲ್ಲಿ 35 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಮಾರನೇ ದಿನ ಶಿವಕಾಶಿ ಸಮೀಪದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ.

No Comments

Leave A Comment