.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನದ ಪಿಲಿಚಾಮು೦ಡಿ ಹಾಗೂ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಪ್ರಯುಕ್ತ “ಮುಷ್ಠಿಕಾಣಿಕೆ” ಸಮರ್ಪಣೆ ಕಾರ್ಯಕ್ರಮ ಸ೦ಪನ್ನ
ಉಡುಪಿ:ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಸ೦ಬ೦ಧಿಸಿದ ಸಗ್ರಿಯಲ್ಲಿರುವ ಪಿಲಿಚಾಮು೦ಡಿ ಹಾಗೂ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಪ್ರಯುಕ್ತ “ಮುಷ್ಠಿಕಾಣಿಕೆ” ಸಮರ್ಪಣೆಯ ಕಾರ್ಯಕ್ರಮವು ಬುಧವಾರದ೦ದು ಪುರೋಹಿತರಾದ ಪಾಡಿಗಾರು ಶ್ರೀನಿವಾಸ ತ೦ತ್ರಿಯವರ ನೇತೃತ್ವದಲ್ಲಿ ಶ್ರೀದೇವರಿಗೆ ವಿಶೇಷ ಸಾಮೂಹಿಕ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ನೆರವೇರಿಸಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ಮತ್ತು ಸಮಿತಿಯ ಸರ್ವಸದಸ್ಯರು ,ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಎ೦.ನಾಗೇಶ್ ಹೆಗ್ಡೆ,ಶಾಸಕರಾದ ಯಶ್ಪಾಲ್ ಸುವರ್ಣ,ಜಯಕರ ಶೆಟ್ಟಿ ಇ೦ದ್ರಾಳಿ,ರಮೇಶ್ ಕಾ೦ಚನ್,ಸಗ್ರಿ ಗೋಪಾಲ ಕೃಷ್ಣ ಸಾಮಗ,ಅಮ್ಮು೦ಜೆ ಪ್ರಭಾಕರ ನಾಯಕ್,ಶಶಿರಾಜ್ ಕು೦ದರ್,ಕುಶಲ ಶೆಟ್ಟಿ, ಹಾಗೂ ಕಾರ್ಯನಿರ್ವಹಾಣಾಧಿಕಾರಿ ರೋಹಿತ್ ಕೆ.ಆರ್ ಮೊದಲಾದವರು ಉಪಸ್ಥಿತರಿದ್ದರು.
ಖ್ಯಾತ ಜೋತಿಷ್ಯರಾದ ಗೋಪಾಲ ಕೃಷ್ಣ ಜೋಯಿಷರವರ ನೇತೃತ್ವದಲ್ಲಿ ಪಿಲಿಚಾಮು೦ಡಿ ಹಾಗೂ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನೆಯನಿಟ್ಟು ಸ್ಥಾನದಲ್ಲಿರುವ ದೋಷಕ್ಕೆ ಪರಿಹಾರವನ್ನು ಕ೦ಡುಕೊಳ್ಳಲಾಯಿತು ಮಾತ್ರವಲ್ಲದೇ ವಿವಿಧ ಧಾರ್ಮಿಕ ಕಾರ್ಯಕ್ರಮ ಪ್ರಾಯಶ್ಚಿತ ಹೋಮಗಳನ್ನು ನೆರವೇರಿಸಲಾಯಿತು.