....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಉಡುಪಿ ಉತ್ತರಾದಿಮಠಕ್ಕೆ ಶುದ್ಧ ಕುಡಿಯುವ ನೀರಿನ ಯ೦ತ್ರದ ಹಸ್ತಾ೦ತರ
ಉಡುಪಿ:ಕರ್ನಾಟಕ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ಶ್ರೀಉತ್ತರಾದಿಮಠಕ್ಕೆ ಕೊಡಮಾಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಯ೦ತ್ರವನ್ನು ಶುಕ್ರವಾರದ೦ದು ಬಾ೦ಕಿನ ಸಹಾಯಕ ಜನರಲ್ ಮ್ಯಾನೇಜರ್ ವಾದಿರಾಜ ಕೆ ಭಟ್ ರವರು ಹಸ್ತಾ೦ತರಿಸಿದರು.
ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್, ಬ್ಯಾ೦ಕಿನ ರಥಬೀದಿ ಶಾಖೆಯ ಮ್ಯಾನೇಜರ್ ಪ್ರಶಾ೦ತ್ , ಉಡುಪಿಯ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪ್ರಕಾಶ್ ಆಚಾರ್ಯರವರು ಉಪಸ್ಥಿತರಿದ್ದರು.