ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು: ಎಂಆರ್‌ಪಿಎಲ್‌ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್‌ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ಸಂದರ್ಭ ದಾರಿ ಮಧ್ಯೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ, ಓರ್ವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತ್ಯಾಜ್ಯ ತೈಲ ಸಂಗ್ರಹ ಟ್ಯಾಂಕ್‌ನಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದ್ದು. ಕಾರ್ಮಿರಲ್ಲಿ ಒಬ್ಬರು ಕನ್ನಡಿಗರಾಗಿದ್ದು, ಇಬ್ಬರು ಹೊರರಾಜ್ಯದವರೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

No Comments

Leave A Comment