Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ತಮಿಳು ನಾಡಿನ ತಿರುವಳ್ಳೂರು ಬಳಿ ಹೊತ್ತಿ ಉರಿದ ಗೂಡ್ಸ್ ರೈಲು; ಸಂಚಾರ ರೈಲು ವ್ಯತ್ಯಯ; ಪರದಾಡಿದ ಸಾವಿರಾರು ಜನರು

ಚೆನ್ನೈ: ತಮಿಳು ನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.

ಭಾರೀ ಬೆಂಕಿಯಿಂದಾಗಿ ಜ್ವಾಲೆಗಳು ಮತ್ತು ದಟ್ಟ ಹೊಗೆ ಉಂಟಾಗಿದ್ದು, ಹಳಿಗಳ ಬಳಿ ವಾಸಿಸುವ ನಿವಾಸಿಗಳು ಭಯಭೀತರಾದರು, ಅವರನ್ನು ಸ್ಥಳಾಂತರಿಸಲಾಗಿದೆ.

ಎನ್ನೋರ್‌ನಿಂದ ಜೋಲಾರ್‌ಪೆಟ್ಟೈಗೆ ಕಚ್ಚಾ ತೈಲ ಸಾಗಿಸುತ್ತಿದ್ದ 45 ಬೋಗಿಗಳನ್ನು ಹೊಂದಿರುವ ಗೂಡ್ಸ್ ರೈಲು ಚೆನ್ನೈ ಸೆಂಟ್ರಲ್‌ನಿಂದ 43 ಕಿ.ಮೀ ದೂರದಲ್ಲಿರುವ ತಿರುವಲ್ಲೂರು-ಎಗತ್ತೂರು ವಿಭಾಗದ ಮೂಲಕ ಹಾದುಹೋಗುವಾಗ ಬೆಳಗ್ಗೆ 4.45 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿತು. ಎರಡು ವ್ಯಾಗನ್‌ಗಳು ಹಳಿ ತಪ್ಪಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ನಿಖರವಾದ ಕಾರಣ ಇನ್ನೂ ತನಿಖೆಯಲ್ಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಬೆಳಗ್ಗೆ 9 ಗಂಟೆಯ ಹೊತ್ತಿಗೆ, ಐದು ಬೋಗಿಗಳನ್ನು ರೇಕ್‌ನಿಂದ ಬೇರ್ಪಡಿಸಲಾಗಿದೆ.

ನಾಲ್ಕು ಬೋಗಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಹೆಚ್ಚುವರಿ ಬೋಗಿಗಳಿಗೆ ಹರಡಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೃಹತ್ ಬೆಂಕಿಯಿಂದಾಗಿ ದಪ್ಪ ಹೊಗೆ ಉಂಟಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಳಿಗಳ ಬಳಿ ವಾಸಿಸುವ ನಿವಾಸಿಗಳನ್ನು ಅಧಿಕಾರಿಗಳು ಸ್ಥಳಾಂತರಿಸುವಂತೆ ಹೇಳಿದರು.

ರೈಲು ಸೇವೆಗಳಿಗೆ ವ್ಯತ್ಯಯ

ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿನ ಎಲ್ಲಾ ಉಪನಗರ ರೈಲು ಸೇವೆಗಳನ್ನು ಬೆಳಗ್ಗೆ 5 ಗಂಟೆಯಿಂದ ಸ್ಥಗಿತಗೊಳಿಸಲಾಯಿತು.

ಮಂಗಳೂರು ಮೇಲ್, ನೀಲಗಿರಿ ಎಕ್ಸ್‌ಪ್ರೆಸ್, ಮೈಸೂರು ಎಕ್ಸ್‌ಪ್ರೆಸ್, ಕೊಯಮತ್ತೂರು ಇಂಟರ್‌ಸಿಟಿ, ತಿರುವನಂತಪುರಂ ಮೇಲ್ ಮತ್ತು ಜೋಲಾರ್‌ಪೇಟೆ ಎಕ್ಸ್‌ಪ್ರೆಸ್ ಸೇರಿದಂತೆ ನಿನ್ನೆ ಚೆನ್ನೈಗೆ ಹೊರಟಿದ್ದ ಸುಮಾರು ಎಂಟು ಎಕ್ಸ್‌ಪ್ರೆಸ್ ರೈಲುಗಳನ್ನು ಅರಕ್ಕೋಣಂ ಮತ್ತು ಕಟ್ಪಾಡಿ ನಡುವೆ ಅಲ್ಪಾವಧಿಗೆ ಸ್ಥಗಿತಗೊಳಿಸಲಾಯಿತು.

No Comments

Leave A Comment