.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉತ್ತರಾಖಂಡ: ಪಿಥೋರಗಢ್‌ನಲ್ಲಿ ಕಮರಿಗೆ ಉರುಳಿದ ಜೀಪ್; 8 ಮಂದಿ ಸಾವು

ಪಿಥೋರಗಢ: ಉತ್ತರಾಖಂಡದ ಪಿಥೋರಗಢದ ಮುವಾನಿ ಪಟ್ಟಣದಲ್ಲಿ 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ.

ಸೋನಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ವಾಹನ ಬಿದ್ದಿದೆ. ದುರಂತ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮುವಾನಿ ಪ್ರದೇಶದ ಭಂಡಾರಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಅಪಘಾತದಲ್ಲಿ ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೇಖಾ ಯಾದವ್ ದೃಢಪಡಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

No Comments

Leave A Comment