ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಚಿತ್ರದುರ್ಗ: ವಿದ್ಯುತ್ ತಂತಿ ತಗುಲಿ ಮೂವರ ದುರ್ಮರಣ, ಹೊಟ್ಟೆಪಾಡಿಗೆ ಹೋಗಿ ಜೀವ ಕಳೆದುಕೊಂಡ ಕಾರ್ಮಿಕರು!

ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಮೃತರನ್ನು ದಾವಣಗೆರೆ ಮೂಲದ ಕಾರ್ಮಿಕರಾದ 30 ವರ್ಷದ ನಜೀರ್, 30 ವರ್ಷದ ಫಾರೂಕ್ ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿ ನಿವಾಸಿ 35 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.

ಶ್ರೀನಿವಾಸ್​​ ಗೆ ಸೇರಿದ ತೋಟದಲ್ಲಿ ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಕೂಡಲೇ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

No Comments

Leave A Comment