....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ: ಹೆಬ್ರಿ ಹೋಟೆಲ್ ಗಲಾಟೆ ಪ್ರಕರಣ; ನಾಲ್ವರು ರೌಡಿಶೀಟರ್‌ಗಳ ಬಂಧನ

ಹೆಬ್ರಿ: ಜು. 23. ಜುಲೈ 20ರಂದು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದ (38ನೇ ಕಳ್ತೂರು) ಸಂತೆಕಟ್ಟೆಯಲ್ಲಿರುವ ಹೋಟೆಲ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ರೌಡಿಶೀಟರ್‌ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತರನ್ನು ಶ್ರೀಕಾಂತ್ ಕುಲಾಲ್, ಸದಾನಂದ ಪೂಜಾರಿ, ಸಂತೋಷ್ ನಾಯಕ್ ಮತ್ತು ರಾಜ ಅಲಿಯಾಸ್ ರಾಜೇಶ್ ನಾಯಕ್ ಎಂದು ಗುರುತಿಸಲಾಗಿದೆ.

ವರದಿಗಳ ಪ್ರಕಾರ, ಶ್ರೀಕಾಂತ್ ಕುಲಾಲ್, ಸದಾನಂದ ಪೂಜಾರಿ ಮತ್ತು ಸಂತೋಷ್ ನಾಯಕ್ ಅವರು ಹಳೆಯ ರೌಡಿಶೀಟರ್ ರಾಜ ಅಲಿಯಾಸ್ ರಾಜೇಶ್ ನಾಯಕ್ ಅವರಿಗೆ ನಿಂದಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಧ್ಯೆ, ಸಂತೋಷ್ ನಾಯಕ್ ಅವರು ರಾಜೇಶ್ ನಾಯಕ್ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಾಂತ್ ಕುಲಾಲ್, ಸಂತೋಷ್ ನಾಯಕ್ ಮತ್ತು ಸದಾನಂದ ಪೂಜಾರಿ ಅವರನ್ನು ವಶಕ್ಕೆ ಪಡೆಯಲಾಗಿದೆ. ದಲಿತ ದೌರ್ಜನ್ಯ ಪ್ರಕರಣ ಸಂಬಂಧ ರಾಜ ಅಲಿಯಾಸ್ ರಾಜೇಶ್ ನಾಯಕ್ ಅವರನ್ನು ಬಂಧಿಸಲಾಗಿದೆ.

No Comments

Leave A Comment