Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...
ವಿಧಾನಮಂಡಲ ಮುಂಗಾರು ಅಧಿವೇಶನ: ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ
ಬೆಂಗಳೂರು: ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದ್ದು, ಈ ನಡುವಲ್ಲೇ ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆ ನಡೆಸುತ್ತಿವೆ.
ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಎನ್ಡಿಎ ಮೈತ್ರಿಕೂಟದ ಶಾಸಕರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ ಅಮಾಯಕರ ಸಾವಿಗೆ ಕಾರಣವಾದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಘಟನೆ ಖಂಡಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ಪರಿಷತ್ ಸದಸ್ಯರು ಉಪಸ್ಥಿತರಿದ್ದರು.