37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...
‘ಧರ್ಮಸ್ಥಳದ ಅಪಪ್ರಚಾರ ಬಗ್ಗೆ ಕಡಿವಾಣ ಹಾಕುವ ಕೆಲಸ ಸರ್ಕಾರದಿಂದ ಆಗಬೇಕು’- ವಿಜಯೇಂದ್ರ
ಧರ್ಮಸ್ಥಳ: ಆ. 17,ವಿಶೇಷ ತನಿಖಾ ದಳದ (ಎಸ್ಐಟಿ) ತನಿಖೆಯ ಹೆಸರಿನಲ್ಲಿ ನಡೆಯುತ್ತಿರುವ ಧರ್ಮಸ್ಥಳದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಭಾನುವಾರ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಸ್ಐಟಿ ತನಿಖೆಗೆ ಬಿಜೆಪಿ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ, ಆದರೆ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಪಿತೂರಿಯನ್ನು ಖಂಡಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಇಂತಹ ಶಕ್ತಿಗಳು ಕೆಲಸ ಮಾಡುತ್ತಿದ್ದರೆ, ಸರ್ಕಾರ ಯಾಕೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ?” ಎಂದು ಪ್ರಶ್ನಿಸಿದರು.
ಹಿರಿಯ ಬಿಜೆಪಿ ನಾಯಕರಾದ ಸಿ ಟಿ ರವಿ, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಮತ್ತು ಭರತ್ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಭಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಪ್ರತಾಪ್ ಸಿಂಹ ನಾಯಕ್, ಯಶ್ಪಾಲ್ ಸುವರ್ಣ ಮತ್ತಿತರರು ಅವರೊಂದಿಗೆ ಇದ್ದರು. ಬಳಿಕ ಅವರೆಲ್ಲರೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಬಿಜೆಪಿ ಕಾರ್ಯಕರ್ತರು ಆಗಸ್ಟ್ 16 ರಂದು ಬೃಹತ್ ‘ಧರ್ಮಸ್ಥಳ ಚಲೋ’ ರ್ಯಾಲಿ ನಡೆಸಿದರು. ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಸುಮಾರು 400 ವಾಹನಗಳಲ್ಲಿ ಪಕ್ಷದ ಕಾರ್ಯಕರ್ತರು ಯಲಹಂಕದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸಿ, ಪ್ರಾರ್ಥನೆ ಸಲ್ಲಿಸಿ, ಧರ್ಮಾಧಿಕಾರಿಗಳೊಂದಿಗೆ ಒಗ್ಗಟ್ಟು ಪ್ರದರ್ಶಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ವಿಶ್ವನಾಥ್, ಈ ಯಾತ್ರೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಬಿಜೆಪಿ ದೃಢವಾಗಿ ನಿಂತಿದೆ ಎಂಬ ಸ್ಪಷ್ಟ ಸಂದೇಶವನ್ನು ಕಳುಹಿಸುವ ಉದ್ದೇಶವನ್ನು ಹೊಂದಿದೆ. ಈ ಯಾತ್ರೆಯು ಧರ್ಮಸ್ಥಳವನ್ನು ದೂಷಿಸುವ ಪ್ರಯತ್ನಗಳ ನಡುವೆ ಅವರಿಗೆ ಬೆಂಬಲ ಸೂಚಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದರು.