ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ
ಉಡುಪಿ: ಹೋಟೆಲ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹತ್ಯೆ
ಉಡುಪಿ:ಉದ್ಯಮಿ ಕೃಷ್ಣರಾಜ್ ಹೆಗ್ಡೆ (45) ಆತ್ರಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಬೈಲೂರು ಮೂಲದ ಕೃಷ್ಣರಾಜ್ ಹೆಗ್ಡೆ ಆತ್ರಾಡಿಯಲ್ಲಿ ವಾಸಿಸುತ್ತಿದ್ದರು. ಅವರ ತಾಯಿ, ಪತ್ನಿ ಮತ್ತು ಒಬ್ಬ ಮಗ ಇದ್ದಾರೆ. ಮಣಿಪಾಲದಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದ ಕೃಷ್ಣರಾಜ್ ಹೆಗ್ಡೆ ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಹಿರಿಯಡ್ಕ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.