...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ: ಹೋಟೆಲ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹತ್ಯೆ

ಉಡುಪಿ:ಉದ್ಯಮಿ ಕೃಷ್ಣರಾಜ್ ಹೆಗ್ಡೆ (45) ಆತ್ರಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಬೈಲೂರು ಮೂಲದ ಕೃಷ್ಣರಾಜ್ ಹೆಗ್ಡೆ ಆತ್ರಾಡಿಯಲ್ಲಿ ವಾಸಿಸುತ್ತಿದ್ದರು. ಅವರ ತಾಯಿ, ಪತ್ನಿ ಮತ್ತು ಒಬ್ಬ ಮಗ ಇದ್ದಾರೆ. ಮಣಿಪಾಲದಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದ ಕೃಷ್ಣರಾಜ್ ಹೆಗ್ಡೆ ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಹಿರಿಯಡ್ಕ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

No Comments

Leave A Comment