....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ: ಹೋಟೆಲ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹತ್ಯೆ

ಉಡುಪಿ:ಉದ್ಯಮಿ ಕೃಷ್ಣರಾಜ್ ಹೆಗ್ಡೆ (45) ಆತ್ರಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಬೈಲೂರು ಮೂಲದ ಕೃಷ್ಣರಾಜ್ ಹೆಗ್ಡೆ ಆತ್ರಾಡಿಯಲ್ಲಿ ವಾಸಿಸುತ್ತಿದ್ದರು. ಅವರ ತಾಯಿ, ಪತ್ನಿ ಮತ್ತು ಒಬ್ಬ ಮಗ ಇದ್ದಾರೆ. ಮಣಿಪಾಲದಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದ ಕೃಷ್ಣರಾಜ್ ಹೆಗ್ಡೆ ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಹಿರಿಯಡ್ಕ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

No Comments

Leave A Comment