....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಇಂದು ಬುಧವಾರ ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ ಪಿ ನಡ್ಡಾ ಅವರ ಸಮ್ಮುಖದಲ್ಲಿ ಉಪ ರಾಷ್ಟ್ರಪತಿ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿದ್ದಾರೆ. .

ನಾಲ್ಕು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ತಲಾ 20 ಪ್ರತಿಪಾದಕರು ಮತ್ತು 20 ಅನುಮೋದಕರ ಸಹಿಗಳಿವೆ. ಪ್ರಧಾನಿ ಮೋದಿ ಜೊತೆಗೆ, ಕೇಂದ್ರ ಸಚಿವರು, ಹಿರಿಯ ಸಂಸದರು ಮತ್ತು ಪ್ರಮುಖ ಮೈತ್ರಿಕೂಟದ ನಾಯಕರ ಹೆಸರನ್ನು ದಾಖಲೆಗಳಲ್ಲಿ ಹೆಸರಿಸಲಾಗಿದೆ.

ಸಂಸತ್ತು ಭವನದಲ್ಲಿ ಯಾರೆಲ್ಲಾ ಹಾಜರಿದ್ದರು

ಸಿಪಿ ರಾಧಾಕೃಷ್ಣನ್ ಮತ್ತು ಪ್ರಧಾನಿ ಮೋದಿ ಅವರೊಂದಿಗೆ ಸಂಸತ್ ಭವನದಲ್ಲಿ ಹಾಜರಿದ್ದವರಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಹಲವಾರು ಹಿರಿಯ ಎನ್‌ಡಿಎ ಮಿತ್ರಪಕ್ಷಗಳು ಮತ್ತು ಕೇಂದ್ರ ಸಚಿವರು ಸೇರಿದ್ದಾರೆ.

ಇವರಲ್ಲಿ ಜನತಾದಳ ಯುನೈಟೆಡ್‌ನಿಂದ ಲಲನ್ ಸಿಂಗ್, ಜಾತ್ಯತೀತ ಜನತಾದಳದಿಂದ ಹೆಡಿ ಕುಮಾರಸ್ವಾಮಿ, ಎಐಎಡಿಎಂಕೆಯಿಂದ ಎಂ ತಂಬಿ ದುರೈ, ಹಿಂದೂಸ್ತಾನಿ ಅವಾಮ್ ಮೋರ್ಚಾದಿಂದ ಜಿತನ್ ರಾಮ್ ಮಾಂಝಿ, ಲೋಕ ಜನಶಕ್ತಿ ಪಕ್ಷದಿಂದ (ರಾಮ್ ವಿಲಾಸ್) ಚಿರಾಗ್ ಪಾಸ್ವಾನ್, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದಿಂದ ಪ್ರಫುಲ್ ಪಟೇಲ್ ಮತ್ತು ಅಸ್ಸೋಂ ಗಣ ಪರಿಷತ್‌ನಿಂದ ಬೀರೇಂದ್ರ ಪ್ರಸಾದ್ ಬೈಶ್ಯ ಹಾಜರಿದ್ದರು.

No Comments

Leave A Comment