ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ನ್ಯೂಯಾರ್ಕ್ಗೆ ಹಿಂತಿರುಗುತ್ತಿದ್ದ ಬಸ್ ಪಲ್ಟಿ; ಭಾರತೀಯರು ಸೇರಿ ಐದು ಮಂದಿ ಮೃತ್ಯು
ಆಲ್ಬನಿ:ಆ. 24,ನಯಾಗರಾ ಫಾಲ್ಸ್ ವೀಕ್ಷಿಸಿ ನ್ಯೂಯಾರ್ಕ್ಗೆ ಹಿಂತಿರುಗುತ್ತಿದ್ದ ಬಸ್ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು ಸೇರಿ ಐವರು ಮೃತಪಟ್ಟಿರುವ ಘಟನೆ ಪೆಂಬ್ರೋಕ್ನಲ್ಲಿ ಸಂಭವಿಸಿದೆ.
ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 54 ಪ್ರಯಾಣಿಕರ ಪೈಕಿ ಐದು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರೆಲ್ಲರು ವಯಸ್ಕರಾಗಿದ್ದಾರೆ. ಬಸ್ ಪಲ್ಟಿಯಾದ ವೇಳೆ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಬಳಿಕ ಹೆಲಿಕಾಪ್ಟರ್ ಹಾಗೂ ಆಂಬ್ಯುಲೆನ್ಸ್ ಮೂಲಕ 40ಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ನ್ಯೂಯಾರ್ಕ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಟೇಟನ್ ಐಲ್ಯಾಂಡ್ನ ಎಂ&ವೈ ಟೂರ್ ಲಿಂಕ್ ನಿರ್ವಹಿಸುತ್ತಿದ್ದ ಈ ಬಸ್, ಕಳೆದ ಎರಡು ವರ್ಷಗಳಲ್ಲಿ ಯಾವುದೇ ಅಪಘಾತಗಳ ದಾಖಲೆಯನ್ನು ಹೊಂದಿರಲಿಲ್ಲ ಎಂದು ವರದಿಯಾಗಿದೆ.