....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಹತ್ಯೆ

ಕಾರ್ಕಳ:ಆ. 26ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment