.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕೇರಳ-ಕರ್ನಾಟಕದ ಗಡಿಯಲ್ಲಿ ಘೋರ ದುರಂತ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಆರು ಜನ ಸಾವು

ಮಂಗಳೂರು:ಆಗಸ್ಟ್​​ .28, ಕರ್ನಾಟಕ ಹಾಗೂ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್​ ಬ್ರೇಕ್ ಫೇಲಾಗಿ ಅಪಘಾತಕ್ಕೀಡಾಗಿದ್ದು  ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ದುರ್ಘಟನೆ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್​ ತುಂಗುದಾಣಕ್ಕೆ ನುಗ್ಗಿ ಬಸ್​ಗಾಗಿ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿ ಒಂದೇ ಕುಟುಂಬದ ಐವರು ಮತ್ತು ಆಟೋ ಚಾಲಕ ಸಾವನ್ನಪ್ಪಿದ್ದಾರೆ.

ಕೇರಳದ ಕಾಸರಗೋಡು ಕಡೆಯಿಂದ ಮಂಗಳೂರು ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್​,​ ಆಟೋ ರಿಕ್ಷಾದ ಹಿಂಬದಿ‌ಗೆ ಡಿಕ್ಕಿ ಹೊಡೆದು ದುರುಂತ ಸಂಭವಿಸಿದೆ. ಮೃತರ ಪೈಕಿ 3 ಮಹಿಳೆಯರು ಮತ್ತು ಓರ್ವ ಪುರುಷ ಒಂದೇ ಕುಟುಂಬದವರು.

ಸದ್ಯ ಮೃತ ಯಾರ ಗುರುತು ಪತ್ತೆ ಆಗಿಲ್ಲ. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

No Comments

Leave A Comment