ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಕೇರಳ: ಇಬ್ಬರು ಮಾವುತರ ಮೇಲೆ ದೇವಸ್ಥಾನದ ಆನೆ ದಾಳಿ; ಓರ್ವ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಆಲಪ್ಪುಳ: ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್‌ನಲ್ಲಿರುವ ದೇವಸ್ಥಾನದಲ್ಲಿರುವ ಆನೆಯು ಇಬ್ಬರ ಮಾವುತರ ಮೇಲೆ ದಾಳಿ ನಡೆಸಿದ್ದು, ಓರ್ವ ಸಾವಿಗೀಡಾಗಿದ್ದು, ಮತ್ತೋರ್ವ ಮಾವುತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತರನ್ನು ನೂರಾನಾಡ್‌‌ನ ಎಡಪ್ಪೊನ್ಮುರಿಯ ನಿವಾಸಿ ಮುರಳೀಧರನ್ ನಾಯರ್ (53) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಈತ ಹರಿಪಾದ್‌ನ ಸುಬ್ರಹ್ಮಣ್ಯ ದೇವಸ್ಥಾನದ ಒಡೆತನದ ಸ್ಕಂದನ್ ಎಂಬ ಆನೆಯ ಮುಖ್ಯ ನಿರ್ವಾಹಕನಾಗಿದ್ದ.

ಮದವೇರಿದ್ದ ಆನೆಯನ್ನು ಕಳೆದ ಕೆಲವು ತಿಂಗಳುಗಳಿಂದ ದೇವಾಲಯದ ಅರ್ಚಕರ ಮನೆಯಲ್ಲಿಯೇ ಕಟ್ಟಿಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮದ ಎಂಬುದು ಗಂಡು ಆನೆಗಳಲ್ಲಿ ವಾರ್ಷಿಕವಾಗಿ ಕಂಡುಬರುವ ಆಕ್ರಮಣಶೀಲತೆ ಮತ್ತು ಅನಿರೀಕ್ಷಿತ ನಡವಳಿಕೆಯ ಸ್ಥಿತಿಯಾಗಿದ್ದು, ಈ ಸಮಯದಲ್ಲಿ ಟೆಸ್ಟೋಸ್ಟೆರಾನ್ ಮಟ್ಟದಲ್ಲಿ ಏರಿಕೆ ಕಂಡುಬರುತ್ತದೆ. ಈ ಸಮಯದಲ್ಲಿ ಟೆಂಪೋರಲ್ ಗ್ರಂಥಿಗಳು ಊದಿಕೊಳ್ಳುತ್ತವೆ ಮತ್ತು ಅದರ ಕಣ್ಣು ಮತ್ತು ಕಿವಿಯ ನಡುವಿನ ಭಾಗದಲ್ಲಿ ಸೋರುವುದನ್ನು ಕಾಣಬಹುದು.

ಭಾನುವಾರ ಮಧ್ಯಾಹ್ನ ಸ್ಕಂದನ್ ಆನೆ ಏಕಾಏಕಿಯಾಗಿ ಮತ್ತೊಬ್ಬ ಮಾವುತ ಸುನೀಲ್ ಕುಮಾರ್ ಮೇಲೆ ದಾಳಿ ಮಾಡಿದೆ. ಆಗ ಮುರಳೀಧರನ್ ಸ್ಥಳಕ್ಕೆ ಧಾವಿಸಿ ಆರಂಭದಲ್ಲಿ ಆನೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

No Comments

Leave A Comment