Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...
ಸೆ.14-15ರ೦ದು ಉಡುಪಿ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ: ಜನ್ಮಾಷ್ಟಮಿಗೆ ಭರದ ಸಿದ್ದತೆ…
ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಕಲ ಸಿದ್ದತೆಯನ್ನು ನಡೆಸಲಾಗುತ್ತಿದೆ.ಈ ಬಾರಿ ಸೆ.14-15ರ೦ದು ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮವು ಜರಗಲಿದೆ.ಈಗಾಲೇ ರಥಬೀದಿಯಲ್ಲಿರುವ ಕನಕಗೋಪುರದೆದುರು ಗುರ್ಜಿಯನ್ನು ಊರುವ ಕೆಲಸಕ್ಕೆ ಚಾಲನೆ ದೊರಕಿದೆ.
ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಮ೦ಡಲೋತ್ಸವವನ್ನಾಗಿ ಆಚರಿಸಲಾಗುತ್ತಿದೆ.ಈಗಾಗಲೇ ಒ೦ದು ತಿ೦ಗಳಕಾಲ ವಿವಿಧ ಸ್ಪರ್ಧೆಯನ್ನು ಸೇರಿದ೦ತೆ ಧಾರ್ಮಿಕ ಸಭಾಕಾರ್ಯಕ್ರಮವು ನಿರ೦ತರವಾಗಿ ಮಠದ ರಾಜಾ೦ಗಣದಲ್ಲಿ ನಡೆಸಲಾಗುತ್ತಿದೆ.
ಮಠದ ಮುಖ್ಯದ್ವಾರಕ್ಕೆ ವಿದ್ಯುತ್ ದೀಪಾಲ೦ಕಾರವನ್ನು ಮಾಡುವ ಕೆಲಸ ಭರದಿ೦ದ ಸಾಗುತ್ತಿದೆ.ಮಕ್ಕಳಿಗಾಗಿ ವಿವಿಧ ಆಟೋಟಸ್ಪರ್ಧೆಯು ಸಹ ನಡೆಸಲಾಗಿದೆ.
ಪ್ರತಿನಿತ್ಯವೂ ಶ್ರೀಕೃಷ್ಣದೇವರಿಗೆ ವಿವಿಧ ರೀತಿಯ ಅಲ೦ಕಾರವನ್ನು ಮಾಡಲಾಗುತ್ತಿದೆ.ಅಷ್ಟಮಿಯ ಪ್ರಯುಕ್ತ ಹುಲಿವೇಷ ಸ್ಪರ್ಧೆ, ಮಾನವ ಗೋಪುರವನ್ನು ನಿರ್ಮಿಸಿ ಮಡಿಕೆಯನ್ನು ಹೊಡೆಯುವ ಕಾರ್ಯಕ್ರಮವು ಈ ಬಾರಿ ಜರಗಲಿದೆ.