ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ
ವಿಧಾನ ಪರಿಷತ್ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು, ವಸತಿ ಸಚಿವ ಜಮೀರ್ ಅಹಮದ್ ಖಾನ್, ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.