.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮಾಜಿ ಸಿಎಂ ಡಿ.ವಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ರೂ ದೋಚಿದ ಸೈಬರ್ ಕಳ್ಳರು
ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್ಎಂವಿ ಎಕ್ಸ್ ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ ಡಿವಿಎಸ್ ಮಾಧ್ಯಮಗಳ ಜೊತೆ ಮಾತನಾಡಿ, ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು.
ಹೆಚ್ಡಿಎಫ್ಸಿ, ಎಸ್ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.