...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಜರು, ಹೇಳಿಕೆ ದಾಖಲು

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು ಶುಕ್ರವಾರ ಹೇಳಿಕೆ ದಾಖಲಿಸಿದ್ದಾರೆ.

ದೇವಾಲಯ ಆಡಳಿತವನ್ನು ಬೆಂಬಲಿಸಿ ಹಲವಾರು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಧರ್ಮಸ್ಥಳ ಗ್ರಾಮದಲ್ಲಿನ ಸಾಮೂಹಿಕ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಆರೋಪಿಸಿದ್ದಕ್ಕಾಗಿ ಎಸ್‌ಐಟಿ ಅವರಿಗೆ ನೋಟಿಸ್ ನೀಡಿತ್ತು.

ಈಮಧ್ಯೆ, ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 26 ರಂದು, ನ್ಯಾಯಾಲಯದ ವಾರಂಟ್ ಪಡೆದು ಎಸ್‌ಐಟಿ ಅಧಿಕಾರಿಗಳು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಶೋಧ ನಡೆಸಿದ್ದರು. ಈ ಕಾರ್ಯಾಚರಣೆಯ ವೇಳೆ, ಶಸ್ತ್ರಾಸ್ತ್ರಗಳು ಮತ್ತು ಬಂದೂಕನ್ನು ವಶಪಡಿಸಿಕೊಳ್ಳಲಾಯಿತು. ತಿಮರೋಡಿ ಅವರು ಅವುಗಳನ್ನು ಅಕ್ರಮವಾಗಿ ಹೊಂದಿದ್ದರು ಎಂದು ಆರೋಪಿಸಲಾಗಿದೆ. ನಂತರ, ಎಸ್‌ಐಟಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಶುಕ್ರವಾರ ಅಧಿಕಾರಿಗಳು ಅವರ ಮನೆಗೆ ಹೋದಾಗ, ಅವರು ಇರಲಿಲ್ಲ. ಹೀಗಾಗಿ, ಅವರ ಮನೆಯ ಮುಂದೆ ನೋಟಿಸ್ ಅಂಟಿಸಲಾಗಿದೆ.

No Comments

Leave A Comment