ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಸೆ.22ರಿಂದ ಅ.3ರವರೆಗೆ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ”

ಉಡುಪಿ: ಉಡುಪಿ ಸಾರ್ವಜನಿಕ‌ ಶ್ರೀ ಶಾರದೋತ್ಸವ ಸಮಿತಿ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ” ಉಡುಪಿ ದಸರಾ” ಇದೇ ಸೆ.22ರಿಂದ ಅ.3ರವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 22ರಂದು ಬೆಳಿಗ್ಗೆ 9ಗಂಟೆಗೆ ನವದುರ್ಗೆಯರು ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು. ಪ್ರತೀ ದಿನ ದುರ್ಗಾಹೋಮ, ಅಕ್ಟೋಬರ್ 1 ರಂದು ಚಂಡಿಕಾಹೋಮ, ಸೆ. 25 ರಂದು ಶ್ರೀ ದುರ್ಗಾ ನಮಸ್ಕಾರ, ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ ಎಂದರು.

ಸಾಂಸ್ಕೃತಿಕ ಸಂಭ್ರಮ:-
ನವರಾತ್ರಿ ಉತ್ಸವದಲ್ಲಿ ಭಜನಾ ಕಾರ್ಯಕ್ರಮ, ಸಂಗೀತ, ನೃತ್ಯ ಸಿಂಚನ, ಯಕ್ಷಗಾನ, ನಾಟಕ, ಜನಪದ ಕಲರವ, ದಾಂಡೀಯಾ, ಕುಣಿತ ಭಜನೆ, ವಿವಿಧ ಸ್ಪರ್ಧೆಗಳು ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರಥಮ ಭಾರಿಗೆ ದ್ವಂದ್ವ ಭಜನಾ ಜುಗಲ್ ಬಂದಿ ನಡೆಯಲಿದೆ. ಸೆ.25ರಂದು ಸಂಜೆ 4ಗಂಟೆಗೆ ಮಾತೃ ಸಂಗಮ ಕಾರ್ಯಕ್ರಮ ನಡೆಯಲಿದೆ.

ಭವ್ಯ ಶೋಭಾಯಾತ್ರೆ:-
ಅಕ್ಟೋಬರ್ 3ರಂದು ಉಡುಪಿ ಶ್ರೀ ಕೃಷ್ಣ ಮಠದಿಂದ ಭವ್ಯ ಶೋಭಾಯಾತ್ರೆ ಹೊರಡಲಿದ್ದು, ಉಡುಪಿ ನಗರದ ಮುಖ್ಯ ಮಾರ್ಗದಲ್ಲಿ ಸಾಗಿ ಮಲ್ಪೆಯ ಸಮುದ್ರ ತೀರದಲ್ಲಿ ಸಮಾಪನಗೊಂಡು ಜಲಸ್ತಂಭನಗೊಳಿಸಲಾಗುವುದು ಎಂದು ಸಾರ್ವಜನಿಕ‌ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವ ಸಲಹೆಗಾರರಾದ ಪ್ರಸನ್ನ ಆಚಾರ್ಯ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಭಟ್, ರಾಧಾಕೃಷ್ಣ ಮೆಂಡನ್, ತಾರಾ ಆಚಾರ್ಯ, ವೀಣಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

No Comments

Leave A Comment