ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಕರಾವಳಿ ಜಾನಪದ ಕ್ರೀಡೆ ‘ಕಂಬಳ’: ರಾಜ್ಯ ಕ್ರೀಡೆ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ
ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ(Kambala) ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ.
ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ.
ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ.
ಸಮಿತಿಯ ಅಧ್ಯಕ್ಷರೇ ಕಂಬಳ ಅಸೋಸಿಯೇಷನ್ ಗೆ ಅಧ್ಯಕ್ಷರಾಗಿದ್ದಾರೆ. ಕಂಬಳ ಕೋಣದ ಮಾಲೀಕರು, ಓಟಗಾರರು ಇತರರಿಗೆ, ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ ಸೌಲಭ್ಯ ಸಿಗಲಿವೆ. ಈ ಬಗ್ಗೆ ಬೈಲಾ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.