ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಕರಾವಳಿ ಜಾನಪದ ಕ್ರೀಡೆ ‘ಕಂಬಳ’: ರಾಜ್ಯ ಕ್ರೀಡೆ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ(Kambala) ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ.

ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ.

ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ.

ಸಮಿತಿಯ ಅಧ್ಯಕ್ಷರೇ ಕಂಬಳ ಅಸೋಸಿಯೇಷನ್ ಗೆ ಅಧ್ಯಕ್ಷರಾಗಿದ್ದಾರೆ. ಕಂಬಳ ಕೋಣದ ಮಾಲೀಕರು, ಓಟಗಾರರು ಇತರರಿಗೆ, ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ ಸೌಲಭ್ಯ ಸಿಗಲಿವೆ. ಈ ಬಗ್ಗೆ ಬೈಲಾ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

No Comments

Leave A Comment