....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಬೆಳಗಾವಿ: ‘ಅಕ್ರಮವಾಗಿ’ ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಸ್ಥಳೀಯರು, ಮೂವರ ಬಂಧನ
ಬೆಳಗಾವಿ: ನೆರೆಯ ತೆಲಂಗಾಣಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಟ್ರಕ್ಗೆ ಐನಾಪುರ ಪಟ್ಟಣದಲ್ಲಿ ಸೋಮವಾರ ರಾತ್ರಿ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯ್ಬಾಗ್ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್ಗೆ ತೆರಳುತ್ತಿದ್ದ ಟ್ರಕ್ ಅನ್ನು ಕಾಗವಾಡ ತಾಲ್ಲೂಕಿನ ಸಿದ್ದೇಶ್ವರ ದೇವಸ್ಥಾನದ ಬಳಿ ತಡೆದು ನಿಲ್ಲಿಸಲಾಗಿದೆ.
ಸ್ಥಳೀಯರು ಪರಿಶೀಲನೆ ನಡೆಸಿದಾಗ, ವಾಹನದೊಳಗೆ ಗೋಮಾಂಸ ಇರುವುದು ಪತ್ತೆಯಾಗಿದೆ. ಇದರಿಂದ ಕೋಪಗೊಂಡ ಅವರು ಟ್ರಕ್ಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಅಗ್ನಿಶಾಮಕ ಇಲಾಖೆ ಮತ್ತು ಉಗಾರ್ ಸಕ್ಕರೆ ಕಾರ್ಖಾನೆಯ ಅಗ್ನಿಶಾಮಕ ದಳದವರು ಬರುವ ಹೊತ್ತಿಗೆ, ವಾಹನವು ಸಂಪೂರ್ಣವಾಗಿ ಸುಟ್ಟುಹೋಗಿತ್ತು.
ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಮತ್ತು ದರೋಡೆ ಪ್ರಕರಣಗಳನ್ನು ದಾಖಲಿಸಲಾಗಿದೆ.
ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಅಡಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಇದಲ್ಲದೆ, ಮಾಂಸವನ್ನು ಅಕ್ರಮವಾಗಿ ಸಾಗಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.