ವಯನಾಡಿನಲ್ಲಿ ಮತ್ತೆ ಭಾರೀ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ, 30 ಮಂದಿ ನಾಪತ್ತೆ...ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ: ವಾಹನಗಳ ಸಂಚಾರಕ್ಕಿಲ್ಲ ತೊಂದರೆ...

ಬೆಂಗಳೂರು: ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ, ಕೋಟ್ಯಂತರ ರೂ ಮೌಲ್ಯದ ವಸ್ತುಗಳು ಭಸ್ಮ

ಬೆಂಗಳೂರು: ನಗರದ ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿರುವ ಪೀಠೋಪಕರಣಗಳ ಮಳಿಗೆಯೊಂದರಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಮಲ್ಲೇಶ್ವರಂನ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿರುವ ಅಂಗಡಿಯಲ್ಲಿ ಮಧ್ಯರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ ಬೆಂಕಿ ಅಕ್ಕಪಕ್ಕದ ಅಪಾರ್ಟ್‍ಮೆಂಟ್‍ನ 3 ಮನೆಗಳಿಗೂ ಆವರಿಸಿದೆ. 13 ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.

ಅಗ್ನಿ ಅವಘಡದ ವೇಳೆ ಅಂಗಡಿ ಒಳಗಡೆ ಸುಮಾರು 10 ಜನ ಕೆಲಸಗಾರರು ಮಲಗಿದ್ದರು. ಅಕ್ಕಪಕ್ಕದ ನಿವಾಸಿಗಳು ಅವರನ್ನು ಎಚ್ಚರಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment