ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಕರೂರು ಕಾಲ್ತುಳಿತ ಪ್ರಕರಣ: ರೋಡ್​ ಶೋಗೆ ಅನುಮತಿ ಇರಲಿಲ್ಲ-ವಿಜಯ್ ವಿರುದ್ಧ ಎಫ್​​ಐಆರ್

ಕರೂರು:ಸೆ. 29ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಇದಕ್ಕೆ ನಟ, ರಾಜಕಾರಣಿ ವಿಜಯ್ ತಡವಾಗಿ ಬಂದಿದ್ದೇ ಕಾರಣ, ಅಷ್ಟೇ ಅಲ್ಲದೆ ರೋಡ್​ ಶೋಗೆ ಅನುಮತಿಯೂ ಇರಲಿಲ್ಲ ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಎಫ್​ಐಆರ್‌ನಲ್ಲಿ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬುಷಿ ಆನಂದ್ ಮತ್ತು ರಾಜ್ಯ ಜಂಟಿ ಕಾರ್ಯದರ್ಶಿ ಸಿಟಿಆರ್ ನಿರ್ಮಲ್ ಕುಮಾರ್ ಹೆಸರುಗಳಿವೆ.

ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ. ರ್‍ಯಾಲಿ ನಡೆಸಲು 11 ಷರತ್ತುಗಳನ್ನು ವಿಧಿಸಲಾಗಿದ್ದು, ಸುರಕ್ಷತೆ ಮತ್ತು ಸಂಚಾರ ನಿಯಂತ್ರಣಕ್ಕಾಗಿ 500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 10,000 ಜನರ ಸಭೆಗೆ ಮಥಿಯಜಗನ್ ಅನುಮತಿ ಕೋರಿದ್ದರು, ಮಧ್ಯಾಹ್ನದ ವೇಳೆಗೆ ವಿಜಯ್ ಬರುತ್ತಾರೆ ಎಂದು ಮಾಧ್ಯಮ ವರದಿಗಳು ಪ್ರಕಟಿಸಿದ ನಂತರ ಜನಸಂದಣಿ 25,000 ಕ್ಕಿಂತ ಹೆಚ್ಚಾಗಿತ್ತು. ವಿಜಯ್ ಸಂಜೆ 4.45 ರ ಸುಮಾರಿಗೆ ವೇಲಾಯುಧಂಪಾಲಯಂನಲ್ಲಿರುವ ಜಿಲ್ಲಾ ಗಡಿಯನ್ನು ತಲುಪಿದ್ದರು, ಅನುಮತಿ ಇಲ್ಲದೆ ರೋಡ್ ಶೋ ನಡೆಸಿದ್ದರು.

ಈ ನಡುವೆ, ಕರೂರ್ ಕಾಲ್ತುಳಿತ ದುರಂತದ ಅಧಿಕೃತ ತನಿಖೆ ಪೂರ್ಣಗೊಳ್ಳುವವರೆಗೆ ವಿಜಯ್ ಅವರ ಪಕ್ಷ ಟಿವಿಕೆ ಯಾವುದೇ ಸಾರ್ವಜನಿಕ ಸಭೆಗಳು ಅಥವಾ ಸಭೆಗಳನ್ನು ನಡೆಸದಂತೆ ನಿರ್ಬಂಧಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸಿದೆ.

ಶನಿವಾರ ನಡೆದ ಟಿವಿಕೆ ಪ್ರಚಾರ ಸಮಾವೇಶದಲ್ಲಿ ಸಂಭವಿಸಿದ ಕಾಲ್ತುಳಿತದ ಬಳಿಕ ಈ ಕುರಿತು ನ್ಯಾಯಾಲಯಕ್ಕೆ ಮನವಿ ಸಲ್ಲಿಕೆಯಾಗಿದೆ. ಈ ದುರಂತವು ಕಾರ್ಯಕ್ರಮ ನಿರ್ವಹಣೆ, ಪೊಲೀಸ್ ಭದ್ರತೆ ಮತ್ತು ಜನಸಂದಣಿ ನಿಯಂತ್ರಣ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆ ಮೂಡಿಸಿದೆ. ಘಟನೆ ಸಂಬಂಧ ಈಗಾಗಲೇ ತಮಿಳುನಾಡು ಸರ್ಕಾರ ತನಿಖೆ ಮುಂದುವರೆಸಿದ್ದು, ಹಿರಿಯ ಅಧಿಕಾರಿಗಳು ಮತ್ತು ಪೊಲೀಸರು ಲೋಪಗಳ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment