ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಗಾಂಧೀಜಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ

ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು.

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಹೇಳಿದರು.

ಇಂದು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿಗಳಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರೀ ಕೂಡ ಒಬ್ಬರು. ಈ ಮಹಾನ್ ಚೇತನಗಳ ಜಯಂತಿಯ ಜೊತೆ ಇಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಕಳೆಗಟ್ಟಿದೆ. ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಕೂಡ ಕೋರುತ್ತೇನೆಂದು ತಿಳಿಸಿದರು.

No Comments

Leave A Comment