ಪೊಲೀಸ್ ಬ್ಯಾಂಡ್ ಜೊತೆಗೆ ಪಟ್ಟದ ಆನೆ, ಕುದುರೆ, ಹಸು ವಿಜಯಯಾತ್ರೆಯಲ್ಲಿ ಭಾಗಿಯಾಗಿದ್ದವು. ಖಾಸಾ ಆಯುಧಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಶ್ರೀಕಂಠದತ್ತ ಒಡೆಯರ್ ಬಳಸುತ್ತಿದ್ದ ಕಾರಿನಲ್ಲಿ ಯದುವೀರ್ ವಿಜಯಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಈ ಬಾರಿ ಜಂಬೂ ಸವಾರಿಯಲ್ಲಿ 58 ಸ್ತಬ್ದಚಿತ್ರಗಳು ಪ್ರದರ್ಶನಗೊಳ್ಳಲಿದೆ. 100ಕ್ಕೂ ಹೆಚ್ಚು ಕಲಾ ತಂಡಗಳು, 60ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಅಶ್ವಾರೋಹಿ ದಳ, ಪೊಲೀಸ್ ಬ್ಯಾಂಡ್ ಹಾಗೂ ಪೊಲೀಸ್ ತುಕಡಿಗಳು ಸಾಗಲಿವೆ.