ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ ;ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಿಜಯದಶಮಿಯ೦ದು ಚಂಡಿಕಾಯಾಗ ಸ೦ಪನ್ನ…
ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ನವರಾತ್ರಿಯ ದಶಮಿ ದಿನವಾದ ಗುರುವಾರದ೦ದು ಚಂಡಿಕಾ ಯಾಗ ನಡೆಯಿತು.
ಅರ್ಚಕರಾದ ಕೃಷ್ಣಾನಂದ ಭಟ್ ಮಣಿಪಾಲ್ , ಶರತ್ ಭಟ್ ಮಲ್ಪೆ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಿ ಕೊಟ್ಟರು. ದೇವಳದ ಅರ್ಚಕರಾದ ದೀಪಕ್ ಭಟ್ , ದಯಾಘನ್ ಭಟ್ , ವಿನಾಯಕ ಭಟ್ ಹಾಗೂ ಚಂಡಿಕಾ ಯಾಗದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಕೈಲಾಸನಾಥ್ ಶೆಣೈ ದಂಪತಿಗಳು ಸಹಕರಿಸಿದರು .
ಶ್ರೀದೇವರಿಗೆ ವಿಶೇಷ ಅಲಂಕಾರ , ಸಮೂಹಿಕ ನಮಸ್ಕಾರ , ಪೂರ್ಣಾಹುತಿ , ಮಹಾಪೂಜೆ , ಪಲ್ಲ ಪೂಜೆ , ಸಮಾರಾಧನೆ , ಶ್ರೀ ಶಾರದಾ ದೇವಿಗೆ ಅರ್ಪಿಸಿದ ಸೀರೆಗಳನ್ನು ಏಲಂ ನೆಡೆಸಿ ವಿತರಣೆ ಮಾಡಲಾಯಿತು.
ಅಲೆವೂರು ಗಣೇಶ್ ಕಿಣಿ , ಪಿ ವಿ ಶೆಣೈ , ವಸಂತ್ ಕಿಣಿ , ಶಾಂತರಾಮ ಪೈ , ಅಶೋಕ್ ಬಾಳಿಗಾ , ಉಮೇಶ್ ಪೈ , ಆಡಳಿತ ಮಂಡಳಿಯ ಸದಸ್ಯರೂ ಹಾಗೂ ಜಿ ಎಸ್ ಬಿ ಯುವಕ ಮ೦ಡಳಿ, ಮಹಿಳಾ ಮಂಡಳಿಯ ಸದಸ್ಯರು ಹಾಗೂ ಶ್ರೀ ಶಾರದಾ ಮೋಹೋತ್ಸವ ಸಮಿತಿಯ ಪದಾಧಿಕಾರಿಗಳು , ನೂರಾರು ಭಕ್ತರು ಉಪಸಿತರಿದ್ದರು.