ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ ;ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಿಜಯದಶಮಿಯ೦ದು ಚಂಡಿಕಾಯಾಗ ಸ೦ಪನ್ನ…
ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ನವರಾತ್ರಿಯ ದಶಮಿ ದಿನವಾದ ಗುರುವಾರದ೦ದು ಚಂಡಿಕಾ ಯಾಗ ನಡೆಯಿತು.
ಅರ್ಚಕರಾದ ಕೃಷ್ಣಾನಂದ ಭಟ್ ಮಣಿಪಾಲ್ , ಶರತ್ ಭಟ್ ಮಲ್ಪೆ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಿ ಕೊಟ್ಟರು. ದೇವಳದ ಅರ್ಚಕರಾದ ದೀಪಕ್ ಭಟ್ , ದಯಾಘನ್ ಭಟ್ , ವಿನಾಯಕ ಭಟ್ ಹಾಗೂ ಚಂಡಿಕಾ ಯಾಗದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಕೈಲಾಸನಾಥ್ ಶೆಣೈ ದಂಪತಿಗಳು ಸಹಕರಿಸಿದರು .
ಶ್ರೀದೇವರಿಗೆ ವಿಶೇಷ ಅಲಂಕಾರ , ಸಮೂಹಿಕ ನಮಸ್ಕಾರ , ಪೂರ್ಣಾಹುತಿ , ಮಹಾಪೂಜೆ , ಪಲ್ಲ ಪೂಜೆ , ಸಮಾರಾಧನೆ , ಶ್ರೀ ಶಾರದಾ ದೇವಿಗೆ ಅರ್ಪಿಸಿದ ಸೀರೆಗಳನ್ನು ಏಲಂ ನೆಡೆಸಿ ವಿತರಣೆ ಮಾಡಲಾಯಿತು.
ಅಲೆವೂರು ಗಣೇಶ್ ಕಿಣಿ , ಪಿ ವಿ ಶೆಣೈ , ವಸಂತ್ ಕಿಣಿ , ಶಾಂತರಾಮ ಪೈ , ಅಶೋಕ್ ಬಾಳಿಗಾ , ಉಮೇಶ್ ಪೈ , ಆಡಳಿತ ಮಂಡಳಿಯ ಸದಸ್ಯರೂ ಹಾಗೂ ಜಿ ಎಸ್ ಬಿ ಯುವಕ ಮ೦ಡಳಿ, ಮಹಿಳಾ ಮಂಡಳಿಯ ಸದಸ್ಯರು ಹಾಗೂ ಶ್ರೀ ಶಾರದಾ ಮೋಹೋತ್ಸವ ಸಮಿತಿಯ ಪದಾಧಿಕಾರಿಗಳು , ನೂರಾರು ಭಕ್ತರು ಉಪಸಿತರಿದ್ದರು.