ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಉಡುಪಿ ;ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಿಜಯದಶಮಿಯ೦ದು ಚಂಡಿಕಾಯಾಗ ಸ೦ಪನ್ನ…

ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ನವರಾತ್ರಿಯ ದಶಮಿ ದಿನವಾದ ಗುರುವಾರದ೦ದು ಚಂಡಿಕಾ ಯಾಗ ನಡೆಯಿತು.

ಅರ್ಚಕರಾದ ಕೃಷ್ಣಾನಂದ ಭಟ್ ಮಣಿಪಾಲ್ , ಶರತ್ ಭಟ್ ಮಲ್ಪೆ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಿ ಕೊಟ್ಟರು. ದೇವಳದ ಅರ್ಚಕರಾದ ದೀಪಕ್ ಭಟ್ , ದಯಾಘನ್ ಭಟ್ , ವಿನಾಯಕ ಭಟ್ ಹಾಗೂ ಚಂಡಿಕಾ ಯಾಗದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಕೈಲಾಸನಾಥ್ ಶೆಣೈ ದಂಪತಿಗಳು ಸಹಕರಿಸಿದರು .

ಶ್ರೀದೇವರಿಗೆ ವಿಶೇಷ ಅಲಂಕಾರ , ಸಮೂಹಿಕ ನಮಸ್ಕಾರ , ಪೂರ್ಣಾಹುತಿ , ಮಹಾಪೂಜೆ , ಪಲ್ಲ ಪೂಜೆ , ಸಮಾರಾಧನೆ , ಶ್ರೀ ಶಾರದಾ ದೇವಿಗೆ ಅರ್ಪಿಸಿದ ಸೀರೆಗಳನ್ನು ಏಲಂ ನೆಡೆಸಿ ವಿತರಣೆ ಮಾಡಲಾಯಿತು.

ಅಲೆವೂರು ಗಣೇಶ್ ಕಿಣಿ , ಪಿ ವಿ ಶೆಣೈ , ವಸಂತ್ ಕಿಣಿ , ಶಾಂತರಾಮ ಪೈ , ಅಶೋಕ್ ಬಾಳಿಗಾ , ಉಮೇಶ್ ಪೈ , ಆಡಳಿತ ಮಂಡಳಿಯ ಸದಸ್ಯರೂ ಹಾಗೂ ಜಿ ಎಸ್ ಬಿ ಯುವಕ ಮ೦ಡಳಿ, ಮಹಿಳಾ ಮಂಡಳಿಯ ಸದಸ್ಯರು ಹಾಗೂ ಶ್ರೀ ಶಾರದಾ ಮೋಹೋತ್ಸವ ಸಮಿತಿಯ ಪದಾಧಿಕಾರಿಗಳು , ನೂರಾರು ಭಕ್ತರು ಉಪಸಿತರಿದ್ದರು.

No Comments

Leave A Comment