ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ
ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಕ್ರಿಮಿನಲ್ ಹೊಣೆಗಾರಿಕೆ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳು ಸ್ಥಳೀಯರು ಎಂದು ಅಧಿಕಾರಿಗಳು ತಿಳಿಸಿದ್ದು, ಆದಾಗ್ಯೂ, ಅವರ ಗುರುತುಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.
ಅಧಿಕಾರಿಗಳ ಪ್ರಕಾರ, ಒಡಿಶಾದ ಜಲೇಶ್ವರ ನಿವಾಸಿ ಮತ್ತು ದುರ್ಗಾಪುರದ ಶಿವಪುರ ಪ್ರದೇಶದ ಐಕ್ಯೂ ಸಿಟಿ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿರುವ 23 ವರ್ಷದ ವಿದ್ಯಾರ್ಥಿನಿ ಶುಕ್ರವಾರ ರಾತ್ರಿ ಪುರುಷ ಸ್ನೇಹಿತನೊಂದಿಗೆ ಹೊರಗೆ ಹೋಗಿದ್ದಾಗ, ಕೆಲವು ದುಷ್ಕರ್ಮಿಗಳು ಕಾಲೇಜು ಗೇಟ್ ಬಳಿ ಅವರನ್ನು ಅಡ್ಡಗಟ್ಟಿ ಕಾಲೇಜು ಆವರಣದಿಂದ ಸುಮಾರು 1 ಕಿಲೋಮೀಟರ್ ದೂರದಲ್ಲಿರುವ ನಿರ್ಜನ ಪ್ರದೇಶಕ್ಕೆ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಕೃತ್ಯದ ಬಳಿಕ ಆರೋಪಿಗಲು ಪರಾರಿಯಾಗಿದ್ದಾರೆ.