ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಪುತ್ತೂರು : ಹೆಜ್ಜೇನು ದಾಳಿ – ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತ್ಯು

ಪುತ್ತೂರು :ಸೇಡಿಯಾಪು ಕೂಟೇಲು ಸಮೀಪ ಶಾಲೆ ಮುಗಿಸಿ ತೆರಳುತ್ತಿರುವಾಗ ಹೆಜ್ಜೇನು ದಾಳಿಯಿಂದ ಮೂವರು ಗಾಯಗೊಂಡಿದ್ದು, ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ(7) ಮೃತ ಬಾಲಕಿ. 5ನೇ ತರಗತಿಯ ವಿದ್ಯಾರ್ಥಿ ಪ್ರತ್ಯೂಶ್ (10), ಸ್ಥಳೀಯ ನಿವಾಸಿ ನಾರಾಯಣ ಗೌಡ (55) ಗಾಯಗೊಂಡವರು. ಅ.10ರಂದು ಸಂಜೆ ವಾಹನದಿಂದ ಇಳಿದು ನಡೆದು ಸಾಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದೆ.

ಬೊಬ್ಬೆ ಕೇಳಿ ಸ್ಥಳೀಯರಾದ ನಾರಾಯಣ ಗೌಡ ರಕ್ಷಣೆ ತೆರಳಿದ್ದು ಅವರ ಮೇಲೆಯೂ ದಾಳಿ ನಡೆಸಿದೆ. ಮೂವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ವರ್ಗಾಯಿಸಲಾಗಿತ್ತು. ದಿಶಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪ್ರತ್ಯೂಶ್ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ನಾರಾಯಣ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

No Comments

Leave A Comment