ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಅಕ್ರಮ ಪಟಾಕಿ ದಾಸ್ತಾನು ಮಳಿಗೆಗೆ ಪೊಲೀಸರ ದಾಳಿ, ಸಾವಿರಕ್ಕೂ ಅಧಿಕ ಮೌಲ್ಯದ ಪಟಾಕಿ ವಶ

ಉಡುಪಿ: ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು, ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ದೀಪಾವಳಿಯ ಹಿನ್ನೆಲೆ­ಯಲ್ಲಿ ಅನಧಿಕೃತವಾಗಿ ಪಟಾಕಿ ಖರೀದಿ ಹಾಗೂ ಸಂಗ್ರಹ ಮಾಡುತ್ತಿರುವ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ವಶಪಡಿಸಿಕೊಂಡ ಪಟಾಕಿಗಳನ್ನು ಪರವಾನಿಗೆ ಪಡೆದು ಸುರಕ್ಷಿತವಾಗಿ ಸಂಗ್ರಹಿಸಿ ನಂತರ ನಾಶಪಡಿಸಲಾಗುವುದು ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.ಈ ಬಗ್ಗೆ ಮೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮು೦ದುವರಿದಿದೆ.

 

No Comments

Leave A Comment