ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಮಹೇಶ್ ವಾಳ್ವೇಕರ್ ಸೇರಿ ಮೂವರು ರಾಜ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಡಾ.ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ.ವೆಂಕಟ್ ಸಿಂಗ್ ಹಾಗೂ ಡಾ.ಮಹೇಶ್ ವಾಳ್ವೇಕರ್ ಅವರು ಗುರುವಾರ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭವನದ ಬ್ಯಾಂಕ್ವೆಟ್ ‌ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು ಪೀಠಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಅಯುಕ್ತರುಗಳಾದ ಡಾ.ರಿಚರ್ಡ್ ವಿನ್ಸೆಂಟ್‌ ಡಿಸೋಜ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನೂ ಕಲಬುರಗಿ ಪೀಠಕ್ಕೆ ನೇಮಕವಾಗಿರುವ ಬಿ. ವೆಂಕಟ್ ಸಿಂಗ್ ಅವರು ದೇವರು ಮತ್ತು ಸಂವಿಧಾನದ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

No Comments

Leave A Comment