.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿಯ ಅ೦ಬಲಪಾಡಿ ಕಾಳಿಕಾ೦ಬ ನಗರದಲ್ಲಿ ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ

ಉಡುಪಿ: ಅಕ್ಟೋಬರ್​ 17: ನೇಣುಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ  ಅ೦ಬಲಪಾಡಿ ಕಾಳಿಕಾ೦ಬ ನಗರದ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್(23) ಮತ್ತು ಪವಿತ್ರಾ(17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಬೇರೊಂದು ಮನೆಯಲ್ಲಿ ಕೆಲಸ ಮಾಡಿ , ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ ಪಿಯುಸಿ ಓದುತ್ತಿದ್ದರು. ಸಹೋದರ ಸಂಬಂಧಿ ಮಲ್ಲೇಶ ವಾರದ ಹಿಂದಷ್ಟೇ ಗಾರೆ ಕೆಲಸಕ್ಕೆ ಎಂದು ಉಡುಪಿಗೆ ಬಂದಿದ್ದ. ತನ್ನ ತಾಯಿ ಮತ್ತು ಪವಿತ್ರಾ ತಾಯಿ ಹನುಮವ್ವ ಅಕ್ಕ-ತಂಗಿಯಾಗಿರುವ ಕಾರಣ ಚಿಕ್ಕಮ್ಮನ ಮನೆಯಲ್ಲೇ ಉಳಿದುಕೊಂಡಿದ್ದ. ಹನುಮವ್ವ ರಾಯಚೂರಿಗೆ ಹೋಗಿದ್ದ ಸಂದರ್ಭ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ.

 

No Comments

Leave A Comment