.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು: ಸ್ಥಳದಲ್ಲೇ ಇಬ್ಬರ ದುರ್ಮರಣ

ಹಾಸನ: ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.

ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು.

ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವತಿ ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಅಪಘಾತದಲ್ಲಿ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment