ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಉಡುಪಿ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ; ಗಂಧೋಪಚಾರ, ಎಣ್ಣೆಶಾಸ್ತ್ರದಲ್ಲಿ ಪಾಲ್ಗೊಂಡ ಮಠಾಧೀಶರು

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ದೀಪಾವಳಿ‌ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬದ ಅಂಗವಾಗಿ ಜಲಪೂರಣ ಹಾಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು.ಜಲಪೂರಣ ಶಾಸ್ತ್ರದ ಅಂಗವಾಗಿ ಮಠದ ಪುರೋಹಿತರು ಕಲಶಪೂಜೆ ಮಾಡಿದರು.

ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಜಲಪೂರಣ ಮಾಡಲಾಯಿತು. ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಪುತ್ತಿಗೆ ಉಭಯ ಶ್ರೀಪಾದರು ಗಂಧೋಪಚಾರದೊಂದಿಗೆ ಎಣ್ಣೆ ಶಾಸ್ತ್ರವನ್ನು ಮಾಡಿದರು. ನೆರೆದಿದ್ದ ಭಕ್ತರಿಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು.

ಪರ್ಯಾಯ ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಪಾದರು ಜಗತ್ತಿನ ಎಲ್ಲ ಭಕ್ತರಿಗೂ ಒಳ್ಳೆಯದಾಗಬೇಕು, ಶಾಂತಿ ಸಿಗಬೇಕು. ಭಗವಂತನ ಅನುಗ್ರಹವಿದ್ದರೆ ಜನರಿಗೆ ಶಾಂತಿ ಸಿಗುತ್ತದೆ ಎಂದು ಶುಭಾಶೀರ್ವಾದ ಮಾಡಿದರು. ದೀಪಾವಳಿ ಹಬ್ಬದ ಮಹತ್ವವನ್ನು ನಾಡಿನ ಸಮಸ್ತ ಜನತೆಗೆ ತಿಳಿಸಿ ಶುಭಹಾರೈಸಿದರು.

No Comments

Leave A Comment