ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮ್ಯಾನ್ಮಾರ್ ನಿಂದ ಪಲಾಯನ, ಥಾಯ್ಲೆಂಡ್ ನಲ್ಲಿ 500 ಭಾರತೀಯರ ಬಂಧನ: ವಾಪಾಸ್ ಕರೆತರಲು ಪ್ರಯತ್ನ ಎಂದ ಕೇಂದ್ರ

ನವದೆಹಲಿ: ಮ್ಯಾನ್ಮಾರ್​​ನಿಂದ ಥೈಲ್ಯಾಂಡ್‌ಗೆ ಪರಾರಿಯಾಗಿರುವ 500 ಭಾರತೀಯರನ್ನು ದೇಶಕ್ಕೆ ವಾಪಾಸ್ ಕರೆತರಲು ಪ್ರಯತ್ನಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್‌ನಿಂದ ಥೈಲ್ಯಾಂಡ್‌ಗೆ ಬಂದ ನಂತರ ಹಲವಾರು ಭಾರತೀಯ ಪ್ರಜೆಗಳನ್ನು ಥಾಯ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ.

ಮ್ಯಾನ್ಮಾರ್​​ನಿಂದ ಥೈಲ್ಯಾಂಡ್‌ಗೆ ಸುಮಾರು 500 ಮಂದಿ ಭಾರತೀಯರು ಅಕ್ರಮವಾಗಿ ಪ್ರವೇಶಿಸಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಥೈಲ್ಯಾಂಡ್‌ನಲ್ಲಿರುವ ಭಾರತೀಯ ಮಿಷನ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಸಮನ್ವಯ ಸಾಧಿಸುತ್ತಿರುವುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಪಲಾಯನ ಮಾಡಿರಬಹುದು ಎಂದು ಮೂಲಗಳು ತಿಳಿಸಿದ್ದು, ಆ ಭಾರತೀಯ ಪ್ರಜೆಗಳು ಹೇಗೆ ಥಾಯ್ಲೆಂಡ್ ಪ್ರವೇಶಿದರು ಎಂಬುದರ ಕುರಿತು ವಿದೇಶಾಂಗ ಸಚಿವಾಲಯ ವಿವರವಾದ ಮಾಹಿತಿ ಒದಗಿಸಿಲ್ಲ.

ಬಂಧಿತರ ಗುರುತನ್ನು ತಿಳಿಯಲು ಮತ್ತು ಅಗತ್ಯ ಕಾರ್ಯವಿಧಾನಗಳು ಪೂರ್ಣಗೊಂಡ ನಂತರ ಅವರು ಸುರಕ್ಷಿತವಾಗಿ ಮರಳುವುದನ್ನು ಖಚಿತಪಡಿಸಿಕೊಳ್ಳಲು ಥೈಲ್ಯಾಂಡ್‌ನಲ್ಲಿರುವ ಭಾರತೀಯ ಮಿಷನ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಸಮನ್ವಯ ಸಾಧಿಸುತ್ತಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

‘ಬಂಧಿತ ವ್ಯಕ್ತಿಗಳು ನಿಜವಾಗಿಯೂ ಭಾರತೀಯ ನಾಗರಿಕರೇ ಎಂಬುದನ್ನು ದೃಢಪಡಿಸಲು ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲಾಗುತ್ತಿದೆ. ಈ ಪ್ರಕ್ರಿಯೆಯು ಬ್ಯಾಂಕಾಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಸಂಬಂಧಿತ ಥಾಯ್ ಏಜೆನ್ಸಿಗಳ ನಡುವಿನ ಸಹಯೋಗವನ್ನು ಒಳಗೊಂಡಿರುತ್ತದೆ.

ಥೈಲ್ಯಾಂಡ್‌ನಲ್ಲಿರುವ ನಮ್ಮ ಮಿಷನ್ ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಮತ್ತು ಥೈಲ್ಯಾಂಡ್‌ನಲ್ಲಿ ಅಗತ್ಯ ಕಾನೂನು ಔಪಚಾರಿಕತೆಗಳು ಪೂರ್ಣಗೊಂಡ ನಂತರ ಅವರನ್ನು ವಾಪಸ್ ಕಳುಹಿಸಲು ಥಾಯ್ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಜೈಸ್ವಾಲ್ ಹೇಳಿದರು.

ಅಕ್ಟೋಬರ್ ಅಂತ್ಯದಲ್ಲಿ 28 ದೇಶಗಳಿಂದ 1,000ಕ್ಕೂ ಹೆಚ್ಚು ಜನರು ಥೈಲ್ಯಾಂಡ್‌ನ ಮೇ ಸೋಟ್ ಅನ್ನು ಪ್ರವೇಶಿಸಿದ್ದರು. ಇದರಲ್ಲಿ ಸುಮಾರು 500 ಭಾರತೀಯರು ಸೇರಿದ್ದಾರೆ ಎನ್ನಲಾಗಿದೆ.

No Comments

Leave A Comment