ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...
ಸಕಲೇಶಪುರ: ಬಿಸಿಲೆ ಘಾಟ್ ಬಳಿ ಕಂದಕಕ್ಕೆ ಉರುಳಿದ ವ್ಯಾನ್; ಓರ್ವ ಸಾವು, 6 ಮಂದಿ ಗಂಭೀರ
ಸಕಲೇಶಪುರ: ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ಬೆಳಗ್ಗೆ ಬಿಸಿಲೆ ಘಾಟ್ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಮೃತರನ್ನು ಶಿವರಾಜ್ (50) ಎಂದು ಗುರುತಿಸಲಾಗಿದೆ.
ವಾಹನದಲ್ಲಿ ಸುಮಾರು 30 ಪ್ರಯಾಣಿಕರಿದ್ದರು, ಅವರಲ್ಲಿ 20 ಮಂದಿಗೆ ಗಾಯಗಳಾಗಿವೆ. ಅವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಈ ಪೈಕಿ ಶಿವರಾಜ್ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.