.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಸಕಲೇಶಪುರ: ಬಿಸಿಲೆ ಘಾಟ್ ಬಳಿ ಕಂದಕಕ್ಕೆ ಉರುಳಿದ ವ್ಯಾನ್; ಓರ್ವ ಸಾವು, 6 ಮಂದಿ ಗಂಭೀರ

ಸಕಲೇಶಪುರ: ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ಬೆಳಗ್ಗೆ ಬಿಸಿಲೆ ಘಾಟ್ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಮೃತರನ್ನು ಶಿವರಾಜ್ (50) ಎಂದು ಗುರುತಿಸಲಾಗಿದೆ.

ವಾಹನದಲ್ಲಿ ಸುಮಾರು 30 ಪ್ರಯಾಣಿಕರಿದ್ದರು, ಅವರಲ್ಲಿ 20 ಮಂದಿಗೆ ಗಾಯಗಳಾಗಿವೆ. ಅವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಈ ಪೈಕಿ ಶಿವರಾಜ್ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

No Comments

Leave A Comment