ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ

ಕಾರವಾರ: ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆಯಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದು, ಈ ಹೇಳಿಕೆ ವಿವಾದ ಸೃಷ್ಟಿಸಿದೆ.

ಹೊನ್ನಾವರದಲ್ಲಿ ಬುಧವಾರ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಏಕತೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಗೇರಿಯವರು ಮಾತನಾಡಿದ್ದಾರೆ.

ಬಂಕಿಮ್ ಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಜನ ಗಣ ಮನಕ್ಕೆ ಸಮನಾಗಿದೆ. ವಂದೇ ಮಾತರಂ ಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಸಾಕಷ್ಟು ಒತ್ತಡವಿತ್ತು. ಆದರೆ, ನಮ್ಮ ಪೂರ್ವಜರು ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನ ಗಣ ಮನವನ್ನು ಹಾಗೂ ರಾಷ್ಟ್ರೀಯ ಗೀತೆಯಾಗಿ ವಂದೇ ಮಾತರಂ ಅನ್ನು ರಚಿಸಿದ್ದರು. ಆದ್ದರಿಂದ ನಾವು ಎರಡೂ ರಾಷ್ಟ್ರಗೀತೆಗಳನ್ನು ಹೊಂದಿದ್ದೇವೆಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಗೀತೆ ಪ್ರೇರಣೆ ನೀಡಿತ್ತು. ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಗಳಿಂದಾಗಿ ವಂದೇ ಮಾತರಂ ಯಾವಾಗಲೂ ನಮಗೆ ಸ್ಫೂರ್ತಿ ನೀಡಿದೆ. ಈ ಗೀತೆ 150 ವರ್ಷ ಹಳೆಯದು. ವಂದೇ ಮಾತರಂ ಎಲ್ಲೆಡೆ ಪಠಿಸಲ್ಪಡಬೇಕು. ಅದು ಎಲ್ಲೆಡೆ ಪ್ರತಿಧ್ವನಿಸಬೇಕು ಎಂದು ತಿಳಿಸಿದರು.

No Comments

Leave A Comment