.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಬಂಟ್ವಾಳ: ರಾಜ್ಯ ಮಟ್ಟದ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ.ಕೆ. ಚಿನ್ನದ ಪದಕ
ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನದೊಂದಿಗೆ ಚಿನ್ನಡ ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ರ್ಟಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಈಕೆ ರಾಜ್ಯ ಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿ. ಅಶೋಕ್ ಆಚಾರ್ಯ ಬಂಟ್ವಾಳ ಇವರು ಈಕೆಯ ಕರಾಟೆ ಗುರು ಆಗಿದ್ದಾರೆ.