ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಮಂಗಳೂರು: ಪಣಂಬೂರು ರಾ.ಹೆ. 66ರಲ್ಲಿ ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು
ಮಂಗಳೂರು:ನ. 15.ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.
ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ.
ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.