ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಕೋಲ್ಕತ್ತಾದ ಎಜ್ರಾ ಸ್ಟ್ರೀಟ್ ಬಳಿ ವಿದ್ಯುತ್ ಉಪಕರಣಗಳನ್ನ ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಅಗ್ನಿ ಅವಘಡ

ಕೋಲ್ಕತ್ತಾ: ನ. 15,ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್‌ನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ.

ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಲೇ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸಿಕೊಂಡಿದೆ. ಜೊತೆಗೆ ದಟ್ಟ ಹೊಗೆ ಆವರಿಸಿಕೊಂಡಿದ್ದು, ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ 20 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.

ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದರಿಂದ ಆ ಸಮಯದಲ್ಲಿ ಯಾವುದೇ ಅಂಗಡಿಗಳು ತೆರೆದಿರಲಿಲ್ಲ. ಹೀಗಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ವಿದ್ಯುತ್ ಸಾಮಗ್ರಿಗಳಿರುವುದರಿಂದ ಬೃಹತ್ ಹೊಗೆ ಆವರಿಸಿದೆ ಎಂದಿದ್ದಾರೆ. ಇನ್ನೂ ಸ್ಥಳೀಯರು ಅಗ್ನಿಶಾಮಕ ದಳ ಸ್ಥಳಕ್ಕೆ ತಡವಾಗಿ ಬಂದಿದೆ, ಹೀಗಾಗಿ ಬೆಂಕಿ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ” ಎಂದು ಪಶ್ಚಿಮ ಬಂಗಾಳ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕ ರಣವೀರ್ ಕುಮಾರ್ ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಅಂಗಡಿ ಮಾಲೀಕರು, ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ, ಬೆಂಕಿ ನಿಯಂತ್ರಿಸುವಲ್ಲಿ ತೊಡಗಿಕೊಂಡರು. ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೃಹತ್ ಹೊಗೆ ಆವರಿಸಿಕೊಂಡಿರುವುದು ಕಂಡುಬಂದಿದೆ. ದೂರದಿಂದಲೇ ದಟ್ಟ ಹೊಗೆ ಕಾಣಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

No Comments

Leave A Comment