.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಆಂಧ್ರಪ್ರದೇಶ: ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಪೊಲೀಸರ ಎನ್‌ಕೌಂಟರ್‌‌ಗೆ ಆರು ನಕ್ಸಲರು ಸಾವು

ಮಾರೆಡುಮಿಲ್ಲಿ (ಆಂಧ್ರಪ್ರದೇಶ): ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರೆಡುಮಿಲ್ಲಿ ಮಂಡಲದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6.30 ರಿಂದ 7 ಗಂಟೆಯ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಲ್ಲೂರಿ ಸೀತಾರಾಮರಾಜು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್ ಬರ್ದಾರ್ ತಿಳಿಸಿದ್ದಾರೆ.

‘ಹೌದು, ಇಂದು (ಮಂಗಳವಾರ) ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ’ ಎಂದು ಬರ್ದಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಎಸ್‌ಪಿ ಪ್ರಕಾರ, ಇದು ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳು ನಡೆಸಿದ ಜಂಟಿ ಕಾರ್ಯಾಚರಣೆಯಾಗಿದೆ.

No Comments

Leave A Comment