ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ: ಮೀನು ಮಾರಾಟ ಫೆಡರೇಷನ್‌ಗೆ ನೀಡಿದ ಭೂ ಗುತ್ತಿಗೆ ರದ್ದುಪಡಿಸಲು ಬ್ಲಾಕ್ ಕಾಂಗ್ರೆಸ್ ಆಗ್ರಹ

ಉಡುಪಿ:ನ.18,ಮಲ್ಪೆ ಹನುಮಾನ್ ನಗರದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ ಹಂಚಿಕೆ ಮಾಡಿರುವ ಸರ್ಕಾರಿ ಭೂಮಿಯ ಗುತ್ತಿಗೆ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಮನವಿ ಸಲ್ಲಿಸಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರ ಮೂಲಕ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಈ ಮನವಿಯನ್ನು ಸಲ್ಲಿಸಲಾಯಿತು.

ಈ ವರ್ಷದ ಏಪ್ರಿಲ್‌ನಲ್ಲಿ ಕರ್ನಾಟಕ ಜಲಮಾರ್ಗಗಳ ಮಂಡಳಿಯು, ಮಲ್ಪೆಯ ಸೀ ವಾಕ್ ಪ್ರದೇಶ ಮತ್ತು ಹನುಮಾನ್ ಭಜನಾ ಮಂದಿರದ ಬಳಿಯಿರುವ ಸುಮಾರು ೮ ಎಕರೆ ಸರ್ಕಾರಿ ಭೂಮಿಯನ್ನು 15 ವರ್ಷಗಳ ಅವಧಿಗೆ ಮಹಾಮಂಡಳಿಗೆ ಗುತ್ತಿಗೆ ನೀಡಿತ್ತು.

ಈ ನೈಸರ್ಗಿಕ ಸೌಂದರ್ಯದಿಂದ ಕೂಡಿದ ಕರಾವಳಿ ಭೂಮಿಯನ್ನು ಮೀನುಗಾರಿಕಾ ಫೆಡರೇಷನ್‌ಗೆ ಗುತ್ತಿಗೆ ನೀಡುವುದರಿಂದ ಮುಂಬರುವ ದಿನಗಳಲ್ಲಿ ಸ್ಥಳೀಯ ಮೀನುಗಾರರಿಗೆ, ಭಜನಾ ಮಂದಿರದ ಭಕ್ತರಿಗೆ ಮತ್ತು ಪ್ರವಾಸಿಗರಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎಂದು ಬ್ಲಾಕ್ ಕಾಂಗ್ರೆಸ್ ಹೇಳಿದೆ. ಈ ಗುತ್ತಿಗೆಯನ್ನು ರದ್ದುಪಡಿಸಿ, ಭೂಮಿಯನ್ನು ಯಾವುದೇ ಖಾಸಗಿ ಅಥವಾ ಸಹಕಾರಿ ಸಂಸ್ಥೆಗೆ ಹಸ್ತಾಂತರಿಸದೆ ಸಾರ್ವಜನಿಕ ಬಳಕೆಗೆ ಮಾತ್ರವೇ ಕಾಯ್ದಿರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಮಾಜಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ಆಶಾ ಚಂದ್ರಶೇಖರ್, ಕಡೆಕಾರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಣ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಸುಕೇಶ್ ಕುಂದರ್ ಮತ್ತು ಸತೀಶ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಾಂಚಿ, ಯುವ ಕಾಂಗ್ರೆಸ್ ನಾಯಕರಾದ ಹಮ್ಮದ್ ಮತ್ತು ಸಂಜಯ್ ಆಚಾರ್ಯ, ಹಾಗೂ ಕಾಂಗ್ರೆಸ್ ಮುಖಂಡರಾದ ಜಯವೀರ್ ಫ್ರೆಡ್ರಿಕ್ಸ್ ಮತ್ತು ಶಿಲ್ಪಾ ಉಪಸ್ಥಿತರಿದ್ದರು.

No Comments

Leave A Comment