.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಚೋದನಕಾರಿ ಭಾಷಣ ಆರೋಪ: ಹಿಂಜಾವೇ ಮುಖಂಡ ರತ್ನಾಕರ್ ಅಮೀನ್ ಬಂಧನ

ಉಡುಪಿ : ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡನೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್(49) ಬಂಧಿತ ಆರೋಪಿ. ನ.15ರಂದು ಉಡುಪಿ ನಗರದ ಜಟ್ಕಾ ನಿಲ್ದಾಣದ ಬಳಿ ಹಿಂದೂ ಜಾಗರಣಾ ವೇದಿಕೆ ಉಡುಪಿ ವತಿಯಿಂದ ದೆಹಲಿ ಬಾಂಬ್ ಸ್ಪೋಟ ಕೃತ್ಯವನ್ನು ಖಂಡಿಸಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು. ಪ್ರ

ತಿಭಟನೆಯಲ್ಲಿ ರತ್ನಾಕರ ಅಮೀನ್, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಭಾಷಣ ಮಾಡಿದ್ದು, ಈ ಬಗ್ಗೆ ರತ್ನಾಕರ ಅಮೀನ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ

ಬಗ್ಗೆ ತನಿಖೆ ನಡೆಸಿದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ.ಬಡಿಗೇರ ನೇತೃತ್ವದ ವಿಶೇಷ ತಂಡವು ಖಚಿತ ಮಾಹಿತಿಯ ಆಧಾರದ ಮೇರೆಗೆ ನ.18ರಂದು ಬೆಳಗ್ಗೆ ಆರೋಪಿ ರತ್ನಾಕರ್ ಮೀನ್‌ನನ್ನು ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ವಶಕ್ಕೆ ಪಡೆದು ಬಂಧಿಸಿ, ನ್ಯಾಯಲಯಕ್ಕೆ ಹಾಜರು ಪಡಿಸಿದೆ.

No Comments

Leave A Comment